ಕರ್ನಾಟಕ ಸರ್ಕಾರ: ಪಂಚಾಯತ್ ರಾಜ್ ನಿರ್ದೇಶನಾಲಯದ ಸುತ್ತೋಲೆ
ಕಡ್ಡಾಯ ಸಭೆ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 3-ಹೆಚ್ ಅಡಿಯಲ್ಲಿ, ಎಲ್ಲಾ ಗ್ರಾಮ ಪಂಚಾಯತಿಗಳು ಎಸ್ಸಿ/ಎಸ್ಟಿ ಸಮುದಾಯದವರಿಗಾಗಿ ಕಡ್ಡಾಯವಾಗಿ ವಿಶೇಷ ಗ್ರಾಮ ಸಭೆಗಳನ್ನು ಆಯೋಜಿಸಬೇಕು.
ಕ್ರಿಯಾಯೋಜನೆ: ಈ ವಿಶೇಷ ಸಭೆಗಳಲ್ಲಿ ಎಸ್ಸಿ/ಎಸ್ಟಿ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನದ ಕ್ರಿಯಾಯೋಜನೆಯನ್ನು ರೂಪಿಸಿ, ಅನುಮೋದನೆ ಪಡೆಯಬೇಕು.
ಆನ್ಲೈನ್ ದಾಖಲಾತಿ: ಸಭೆಯ ನಡವಳಿಗಳು (Minutes of the Meeting) ಮತ್ತು ಸಭೆಯ ಭಾವಚಿತ್ರಗಳನ್ನು ಕಡ್ಡಾಯವಾಗಿ ಪಂಚತಂತ್ರ 2.0 ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕೆಂದು ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ.

No comments:
Post a Comment